ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿದ್ದು, ಜಿಲ್ಲೆಯ ನಾಗರಿಕರಲ್ಲಿ ತಲ್ಲಣ ಮೂಡಿಸಿದೆ.
ಕಳೆದ ಫೆಬ್ರುವರಿಯಲ್ಲಿ ಮೆಕ್ಕಾ ಯಾತ್ರೆ ನಡೆಸಿ ಮಾರ್ಚ್ ಎರಡನೇ ವಾರದಲ್ಲಿ ವಾಪಾಸಾಗಿದ್ದ ಗೌರಿಬಿದನೂರು ನಗರದ ನಾಲ್ಕು ಯಾತ್ರಿಕರಿಗೆ ಕೋವಿಡ್-19 ತಗಲಿರುವುದು ಮಾರ್ಚ್ 21, 23, 24 ಮತ್ತು 26 ರಂದು ದೃಢಪಟ್ಟಿತ್ತು.ಈ ಪೈಕಿ ಗೌರಿಬಿದನೂರಿನಲ್ಲಿ ಮಗನ ಮನೆಯಲ್ಲಿ ಗೃಹ ಬಂಧನದಲ್ಲಿದ್ದ ನೆರೆಯ ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿಗೆ ಸೇರಿದ ಮಹಿಳೆ ಮಾರ್ಚ್ 25 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.