ಮೈಸೂರು: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 5 ಮಂದಿಗೆ ‘ಕೋವಿಡ್–19’ ಪ್ರಕರಣಗಳು ದೃಢಪಟ್ಟಿದ್ದು, ಆತಂಕವನ್ನು ಇಮ್ಮಡಿಸಿವೆ.
ನಂಜನಗೂಡಿನಲ್ಲಿ 4 ಮಂದಿಗೆ ಹಾಗೂ ಮೈಸೂರು ನಗರ ನಿವಾಸಿಯೊಬ್ಬರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.
ಮೊನ್ನೆಯಷ್ಟೇ ನಂಜನಗೂಡಿನ ಔಷಧ ತಯಾರಿಕಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಕೋವಿಡ್ ಪತ್ತೆಯಾಗಿತ್ತು. ಈಗ ಪತ್ತೆಯಾಗಿರುವ ಐವರು ಇದೇ ಕಾರ್ಖಾನೆಯ ನೌಕರರಾಗಿದ್ದಾರೆ. ನಂಜನಗೂಡು ಪಟ್ಟಣವನ್ನು ಶನಿವಾರ ರಾತ್ರಿಯಿಂದಲೇ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.