ಗೋವಾದಿಂದ ಜುಲೈ 2ರಂದು ವಾಪಸ್ ಮರಳಿದ್ದ ಯುವಕ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಮೂರು ದಿನಗಳ ನಂತರ ಸಾವಿಗೀಡಾಗಿದ್ದನು. ಕೋವಿಡ್ ಲಕ್ಷಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಯಮಾವಳಿಗಳ ಅನ್ವಯವೇ ಅಂತ್ಯಕ್ರಿಯೆ ನಡೆಸಿತ್ತು. ಇದೀಗ ಯುವಕನ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲತಾಂಶದಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಯುವಕನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 40 ಮಂದಿಯನ್ನು ಕ್ವಾರೆಂಟೈನ್ಗೆ ಒಳಪಡಿಸಲಾಗಿದೆ.