ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆಯಲ್ಲಿ ಕೋವಿಡ್‌ಗೆ 30 ವರ್ಷದ ಯುವಕ ಬಲಿ

ಜುಲೈ 2ರಂದು ಗೋವಾದಿಂದ ಮರಳಿದ್ದನು; ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ ಏಳಕ್ಕೆ ಏರಿಕೆ
Last Updated 7 ಜುಲೈ 2020, 9:45 IST
ಅಕ್ಷರ ಗಾತ್ರ

ಬಾಗಲಕೋಟೆ: ಗುಳೇದಗುಡ್ಡ ತಾಲ್ಲೂಕು ಹಾನಾಪುರ (ಎಲ್‌ಟಿ) ಗ್ರಾಮದಲ್ಲಿ ಅನಾರೋಗ್ಯದಿಂದ ಜುಲೈ 5ರಂದು ಸಾವಿಗೀಡಾಗಿದ್ದ 30 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್–19ಗೆ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಗೋವಾದಿಂದ ಜುಲೈ 2ರಂದು ವಾಪಸ್ ಮರಳಿದ್ದ ಯುವಕ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಮೂರು ದಿನಗಳ ನಂತರ ಸಾವಿಗೀಡಾಗಿದ್ದನು. ಕೋವಿಡ್ ಲಕ್ಷಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿಯಮಾವಳಿಗಳ ಅನ್ವಯವೇ ಅಂತ್ಯಕ್ರಿಯೆ ನಡೆಸಿತ್ತು. ಇದೀಗ ಯುವಕನ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲತಾಂಶದಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಯುವಕನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 40 ಮಂದಿಯನ್ನು ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT