ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಂ.ಎಸ್.ಪಾಟೀಲ 'ಪ್ರಜಾವಾಣಿ' ಗೆ ಪ್ರತಿಕ್ರಿಯಿಸಿ, 'ದುಬೈ ಪ್ರವಾಸಕ್ಕೆ ತೆರಳಿದ ಇಬ್ಬರು ವ್ಯಕ್ತಿಗಳು ಮಾರ್ಚ್ 12ಕ್ಕೆ ಸೈದಾಪುರ ಪಟ್ಟಣಕ್ಕೆ ಆಗಮಿಸಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗಿದೆ. ಪಟ್ಟಣಕ್ಕೆ ಬಂದ ಮೇಲೆ ವೈದ್ಯರಿಂದ ತಪಾಸಣೆ ಮಾಡಲಾಗಿದೆ. 14 ದಿನ ಪ್ರತ್ಯೇಕವಾಗಿರಿಸಿ ನಿಗಾ ಇಡಲಾಗುತ್ತದೆ. ಸದ್ಯಕ್ಕೆ ಕೊರೊನಾ ಸೋಂಕಿತ ಲಕ್ಷಣಗಳು ಕಂಡು ಬಂದಿಲ್ಲ. ಆದರೂ ನಿಗಾವಹಿಸಲಾಗಿದೆ' ಎಂದರು.