ಇಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬರುವಂತಹ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಹಾಗೂ ಕರ್ನಾಟಕದ ಜನರು ಮಹಾರಾಷ್ಟ್ರಕ್ಕೆ ತೆರಳದಂತೆ ತಡೆ ಹಿಡಿಯಲಾಗುತ್ತಿದೆ. ಆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನ ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಮುಂಜಾಗ್ರತೆ ವಹಿಸಲಾಗಿದೆ ಎಂದರು.
ರಾಜ್ಯದಲ್ಲಿ ಈಗಾಗಲೇ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಾರ್ವಜನಿಕರುಅನಗತ್ಯವಾಗಿ ಮನೆಯಿಂದ ಹೊರಗಡೆಗೆ ಬರಬಾರದು. ಆದೇಶ ಉಲ್ಲಂಘಿಸಿ ಪ್ರಯಾಣ ಮಾಡಿದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಚೆಕ್ ಪೋಸ್ಟಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.