ಸೋಂಕಿತರ ಕುಟುಂಬದ ವ್ಯಕ್ತಿಯೊಬ್ಬರಿಗೆ ನಾಲ್ಕು ದಿನಗಳ ಹಿಂದೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಮುಂಜಾಗ್ರತಾ ಕ್ರಮವಾಗಿ ಆ ವ್ಯಕ್ತಿಯ ಸಹೋದರನನ್ನು ಅಧಿಕಾರಿಗಳು ಕರೆದೊಯ್ದು ಕ್ವಾರೆಂಟೈನ್ ಗೆ ಒಳಪಡಿಸಿದ್ದರು. ಆದರೆ ಅವರು ಕ್ವಾರೆಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡಿದ್ದರೆ. ಜೊತೆಗೆ ಅದೇ ಕುಟುಂಬದವರ ಮನೆಗೆ ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ಇಚಲಕರಂಜಿಯಿಂದ ವ್ಯಕ್ತಿಯೊಬ್ಬರು ಬಂದು ಕೆಲ ದಿನಗಳು ವಾಸವಿದ್ದರು. ಆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ಕೊಟ್ಟಿರಲಿಲ್ಲ. ಕ್ವಾರೆಂಟೈನ್ ನಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಮತ್ತೆ ಕರೆತಂದು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಸೋಂಕು ದೃಢಪಟ್ಟಿತ್ತು.