<p><strong>ಕಲಬುರ್ಗಿ:</strong> ಕೊರೊನಾವೈರಸ್ ಸೋಂಕು ತಗುಲುವ ಭೀತಿಯ ಹಿನ್ನೆಲೆಯಲ್ಲಿ ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಸ್ಕ್ರೀನಿಂಗ್ ಮಾಡಲಾಗುತ್ತಿದೆ.</p>.<p>ಕಲಬುರ್ಗಿಯಲ್ಲಿ ವೃದ್ಧರೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು ದೃಢಪಟ್ಟ ನಂತರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದೆ. ಶುಕ್ರವಾರ ಇಡೀ ನಗರದಲ್ಲಿ ಆತಂಕದ ಛಾಯೆ ಆವರಿಸಿತ್ತು.</p>.<p>ಇದರಿಂದ ಎಚ್ಚೆತ್ತುಕೊಂಡ ಸ್ಥಳೀಯ ರೈಲ್ವೆ ಅಧಿಕಾರಿಗಳು ಶನಿವಾರ ತುರ್ತು ಕ್ರಮ ಕೈಗೊಂಡು ತಪಾಸಣೆ ಆರಂಭಿಸಿದ್ದಾರೆ.</p>.<p>ಮೊದಲು ರೈಲ್ವೆ ಅಧಿಕಾರಿಗಳೇ ಸ್ಕ್ರೀನಿಂಗ್ ಮಾಡಿಸಿಕೊಳ್ಳುವ ಮೂಲಕ ಪ್ರಯಾಣಿಕರಲ್ಲಿ ವಿಶ್ವಾಸ ಮೂಡಿಸಿದರು.</p>.<p>ರೈಲ್ವೆ ನಿಲ್ದಾಣದ ನೆಲ, ಆಸನಗಳು, ಕುಳಿತುಕೊಳ್ಳುವ ಕಟ್ಟೆ, ಟಿಕೇಟ್ ಕೌಂಟರಿನ ಗ್ರಿಲ್, ಡೆಸ್ಕ್, ತುರ್ತು ಟಿಕೇಟ್ ನೀಡುವ ಯಂತ್ರ ಸೇರಿದಂತೆ ಇಡೀ ನಿಲ್ದಾಣದ ಇಂಚಿಂಚೂ ಬಿಡದಂತೆ ಸ್ವಚ್ಛಗೊಳಿಸಲಾಯಿತು.</p>.<p>ಮೈಕಿನಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೈಲ್ವೆ ನಿಲ್ದಾಣದ ಮ್ಯಾನೇಜರ್ ಎ.ಎಸ್. ಪ್ರಸಾದರಾವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕೊರೊನಾವೈರಸ್ ಸೋಂಕು ತಗುಲುವ ಭೀತಿಯ ಹಿನ್ನೆಲೆಯಲ್ಲಿ ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಸ್ಕ್ರೀನಿಂಗ್ ಮಾಡಲಾಗುತ್ತಿದೆ.</p>.<p>ಕಲಬುರ್ಗಿಯಲ್ಲಿ ವೃದ್ಧರೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು ದೃಢಪಟ್ಟ ನಂತರ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದೆ. ಶುಕ್ರವಾರ ಇಡೀ ನಗರದಲ್ಲಿ ಆತಂಕದ ಛಾಯೆ ಆವರಿಸಿತ್ತು.</p>.<p>ಇದರಿಂದ ಎಚ್ಚೆತ್ತುಕೊಂಡ ಸ್ಥಳೀಯ ರೈಲ್ವೆ ಅಧಿಕಾರಿಗಳು ಶನಿವಾರ ತುರ್ತು ಕ್ರಮ ಕೈಗೊಂಡು ತಪಾಸಣೆ ಆರಂಭಿಸಿದ್ದಾರೆ.</p>.<p>ಮೊದಲು ರೈಲ್ವೆ ಅಧಿಕಾರಿಗಳೇ ಸ್ಕ್ರೀನಿಂಗ್ ಮಾಡಿಸಿಕೊಳ್ಳುವ ಮೂಲಕ ಪ್ರಯಾಣಿಕರಲ್ಲಿ ವಿಶ್ವಾಸ ಮೂಡಿಸಿದರು.</p>.<p>ರೈಲ್ವೆ ನಿಲ್ದಾಣದ ನೆಲ, ಆಸನಗಳು, ಕುಳಿತುಕೊಳ್ಳುವ ಕಟ್ಟೆ, ಟಿಕೇಟ್ ಕೌಂಟರಿನ ಗ್ರಿಲ್, ಡೆಸ್ಕ್, ತುರ್ತು ಟಿಕೇಟ್ ನೀಡುವ ಯಂತ್ರ ಸೇರಿದಂತೆ ಇಡೀ ನಿಲ್ದಾಣದ ಇಂಚಿಂಚೂ ಬಿಡದಂತೆ ಸ್ವಚ್ಛಗೊಳಿಸಲಾಯಿತು.</p>.<p>ಮೈಕಿನಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೈಲ್ವೆ ನಿಲ್ದಾಣದ ಮ್ಯಾನೇಜರ್ ಎ.ಎಸ್. ಪ್ರಸಾದರಾವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>