<p><strong>ಬೆಂಗಳೂರು: </strong>ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ವಧಿಯಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದರೂ ಪ್ರತಿ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೊಷಿಸಿದ್ದಾರೆ. ಇಂದು (ಶನಿವಾರ) ಸಂಜೆ 7 ಗಂಟೆಗೇ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ ಬೆಳಿಗ್ಗೆ 7ರವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಹೇಳಿದೆ.</p>.<p><strong>ಏನೇನು ಇರಲಿವೆ?</strong></p>.<p>* ಔಷಧ ಅಂಗಡಿಗಳು</p>.<p>* ಆಸ್ಪತ್ರೆಗಳು</p>.<p>* ಹಾಲಿನ ಅಂಗಡಿಗಳು</p>.<p>* ತರಕಾರಿ ಮಾರಾಟ</p>.<p><strong>ಏನೇನು ಇರಲ್ಲ?</strong></p>.<p>* ಸಮೂಹ ಸಾರಿಗೆ</p>.<p>* ಬಸ್</p>.<p>* ಆಟೊ</p>.<p>* ಟ್ಯಾಕ್ಸಿ</p>.<p>* ಅಂಗಡಿ ಮುಂಗಟ್ಟು</p>.<p><strong>ಪೂರ್ವ ನಿಗದಿತ ಮದುವೆ ಸಮಾರಂಭಕ್ಕಿದೆ ಅನುಮತಿ</strong></p>.<p>‘ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳು ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p><strong>‘ಕರ್ಫ್ಯೂ ಕಟ್ಟುನಿಟ್ಟು’</strong></p>.<p>ನಾಲ್ಕನೇ ಅವಧಿಯ ಲಾಕ್ಡೌನ್ಗಿಂತಲೂ ಮೊದಲಿದ್ದ ಮಾದರಿಯಲ್ಲಿಯೇ ಸಂಪೂರ್ಣ ಲಾಕ್ಡೌನ್ ಇರುತ್ತದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/stateregional/covid-19-karnataka-update-total-cases-increased-730155.html" itemprop="url">Covid-19 Karnataka Update| 196 ಹೊಸ ಪ್ರಕರಣ: ಸೋಂಕಿತರ ಸಂಖ್ಯೆ 2 ಸಾವಿರದತ್ತ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ವಧಿಯಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದರೂ ಪ್ರತಿ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೊಷಿಸಿದ್ದಾರೆ. ಇಂದು (ಶನಿವಾರ) ಸಂಜೆ 7 ಗಂಟೆಗೇ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ ಬೆಳಿಗ್ಗೆ 7ರವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಹೇಳಿದೆ.</p>.<p><strong>ಏನೇನು ಇರಲಿವೆ?</strong></p>.<p>* ಔಷಧ ಅಂಗಡಿಗಳು</p>.<p>* ಆಸ್ಪತ್ರೆಗಳು</p>.<p>* ಹಾಲಿನ ಅಂಗಡಿಗಳು</p>.<p>* ತರಕಾರಿ ಮಾರಾಟ</p>.<p><strong>ಏನೇನು ಇರಲ್ಲ?</strong></p>.<p>* ಸಮೂಹ ಸಾರಿಗೆ</p>.<p>* ಬಸ್</p>.<p>* ಆಟೊ</p>.<p>* ಟ್ಯಾಕ್ಸಿ</p>.<p>* ಅಂಗಡಿ ಮುಂಗಟ್ಟು</p>.<p><strong>ಪೂರ್ವ ನಿಗದಿತ ಮದುವೆ ಸಮಾರಂಭಕ್ಕಿದೆ ಅನುಮತಿ</strong></p>.<p>‘ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳು ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p><strong>‘ಕರ್ಫ್ಯೂ ಕಟ್ಟುನಿಟ್ಟು’</strong></p>.<p>ನಾಲ್ಕನೇ ಅವಧಿಯ ಲಾಕ್ಡೌನ್ಗಿಂತಲೂ ಮೊದಲಿದ್ದ ಮಾದರಿಯಲ್ಲಿಯೇ ಸಂಪೂರ್ಣ ಲಾಕ್ಡೌನ್ ಇರುತ್ತದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/stateregional/covid-19-karnataka-update-total-cases-increased-730155.html" itemprop="url">Covid-19 Karnataka Update| 196 ಹೊಸ ಪ್ರಕರಣ: ಸೋಂಕಿತರ ಸಂಖ್ಯೆ 2 ಸಾವಿರದತ್ತ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>