‘14 ದಿನಗಳ ನಂತರವೂ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಾರದ ಕಾರಣ ಪ್ರತ್ಯೇಕ ವಾರ್ಡ್ಗೆ ದಾಖಲು ಮಾಡಲಾಗಿದೆ. ಆಕೆಯ ರಕ್ತ, ಕಫ ಹಾಗೂ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೊಹಮ್ಮದ್ ಸಿದ್ದಕಿ ಇದ್ದ ವಿಮಾನದಲ್ಲಿ ಪ್ರಯಾಣ ಮಾಡಿರುವುದಾಗಿ ಹೇಳುತ್ತಿರುವ ಕಾರಣ ವಿಶೇಷ ನಿಗಾ ವಹಿಸಲಾಗಿದೆ. ಅದೇ ವಿಮಾನದಲ್ಲಿ ಪ್ರಯಾಣಿಸಿದ್ದ ಮಹಿಳೆ ಕುಟುಂಬದ ಇತರ ಸದಸ್ಯರಿಗೆ ಕೋರೊನಾ ಸೋಂಕಿನ ಲಕ್ಷಣ ಕಂಡು ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.