<p><strong>ಕಲಬುರ್ಗಿ:</strong>ಕೋವಿಡ್-19 ವೈರಸ್ ತಗುಲಿ ಮೃತಪಟ್ಟ ನಗರದ ಮೋಮಿನಪುರ ನಿವಾಸಿ ಮೊಹ್ಮದ್ ಹುಸೇನ್ ಸಿದ್ದಿಕಿ (76) ಅವರ ಮಗನ ಜೊತೆ ಸಂದರ್ಶನ ನಡೆಸಿದ್ದ ಇಬ್ಬರು ಪತ್ರಕರ್ತರು ಹಾಗೂ ಓರ್ವ ಕ್ಯಾಮರಾಮನ್ ಮೇಲೆ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.</p>.<p>ಶರತ್ ಅವರು ನಗರದಲ್ಲಿ ಬೆಳಗ್ಗೆ ಸುದ್ದಿಗೋಷ್ಟಿ ನಡೆಸಿದರು.ಸಿದ್ದಿಕಿ ಅವರ ಮಗನೊಂದಿಗೆ ಸಂದರ್ಶನ ನಡೆಸಿದ್ದಸ್ಥಳೀಯ ಉರ್ದು ಚಾನೆಲ್ ವರದಿಗಾರ, ರಾಜ್ಯಮಟ್ಟದ ವಾಹಿನಿಯೊಂದರ ಜಿಲ್ಲಾ ವರದಿಗಾರ ಹಾಗೂ ಕ್ಯಾಮೆರಾಮನ್ ಸುದ್ದಿಗೋಷ್ಟಿಗೆ ಆಗಮಿಸಿದ್ದರು. ಈ ವೇಳೆಮಾತು ಆರಂಭಿಸುವ ಮೊದಲು,ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ತಿಳಿಸಿದರು. ಮಾತ್ರವಲ್ಲದೆ,ಮನೆಯಲ್ಲಿಯೂ 14 ದಿನಗಳವರೆಗೆ ಪ್ರತ್ಯೇಕವಾಗಿ ಇರಬೇಕು ಎಂದರು. </p>.<p>ಸಿದ್ದಿಕಿ ಅವರೊಂದಿಗೆ ಒಡನಾಟ ಹೊಂದಿದ್ದ 46 ಜನ ಸೇರಿದಂತೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 71 ಜನರ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದೂ ತಿಳಿಸಿದರು.</p>.<p>ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣಿಸಿ, ಅಗತ್ಯಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಅವರು,ವೈರಸ್ ಕುರಿತು ಜನರಲ್ಲಿ ಅರಿವು ಮೂಡಿಸಲು ಸಹಕರಿಸುವಂತೆ ಮಾಧ್ಯಮದವರನ್ನು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಕೋವಿಡ್-19 ವೈರಸ್ ತಗುಲಿ ಮೃತಪಟ್ಟ ನಗರದ ಮೋಮಿನಪುರ ನಿವಾಸಿ ಮೊಹ್ಮದ್ ಹುಸೇನ್ ಸಿದ್ದಿಕಿ (76) ಅವರ ಮಗನ ಜೊತೆ ಸಂದರ್ಶನ ನಡೆಸಿದ್ದ ಇಬ್ಬರು ಪತ್ರಕರ್ತರು ಹಾಗೂ ಓರ್ವ ಕ್ಯಾಮರಾಮನ್ ಮೇಲೆ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಹೇಳಿದರು.</p>.<p>ಶರತ್ ಅವರು ನಗರದಲ್ಲಿ ಬೆಳಗ್ಗೆ ಸುದ್ದಿಗೋಷ್ಟಿ ನಡೆಸಿದರು.ಸಿದ್ದಿಕಿ ಅವರ ಮಗನೊಂದಿಗೆ ಸಂದರ್ಶನ ನಡೆಸಿದ್ದಸ್ಥಳೀಯ ಉರ್ದು ಚಾನೆಲ್ ವರದಿಗಾರ, ರಾಜ್ಯಮಟ್ಟದ ವಾಹಿನಿಯೊಂದರ ಜಿಲ್ಲಾ ವರದಿಗಾರ ಹಾಗೂ ಕ್ಯಾಮೆರಾಮನ್ ಸುದ್ದಿಗೋಷ್ಟಿಗೆ ಆಗಮಿಸಿದ್ದರು. ಈ ವೇಳೆಮಾತು ಆರಂಭಿಸುವ ಮೊದಲು,ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ತಿಳಿಸಿದರು. ಮಾತ್ರವಲ್ಲದೆ,ಮನೆಯಲ್ಲಿಯೂ 14 ದಿನಗಳವರೆಗೆ ಪ್ರತ್ಯೇಕವಾಗಿ ಇರಬೇಕು ಎಂದರು. </p>.<p>ಸಿದ್ದಿಕಿ ಅವರೊಂದಿಗೆ ಒಡನಾಟ ಹೊಂದಿದ್ದ 46 ಜನ ಸೇರಿದಂತೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ 71 ಜನರ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದೂ ತಿಳಿಸಿದರು.</p>.<p>ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣಿಸಿ, ಅಗತ್ಯಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಅವರು,ವೈರಸ್ ಕುರಿತು ಜನರಲ್ಲಿ ಅರಿವು ಮೂಡಿಸಲು ಸಹಕರಿಸುವಂತೆ ಮಾಧ್ಯಮದವರನ್ನು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>