ಯುವಕ ಜ್ವರದಿಂದ ಬಳಲುತ್ತಿದ್ದನು. ವಿದೇಶದಿಂದ ಮರಳಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೆದರಿದ್ದರು. ಆಂಬುಲೆನ್ಸ್ ಕಳಿಸಿ ಕರೆತಂದು ಚಿಕಿತ್ಸೆ ನೀಡಿದ್ದೇವೆ. ಈಗ ಚೇತರಿಸಿಕೊಂಡಿದ್ದಾನೆ. ಮೇಲ್ನೋಟಕ್ಕೆ ಕೊರೊನಾ ವೈರಸ್ ಸೋಂಕು ಪೀಡಿತ ಅನ್ನಿಸುತ್ತಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಎಂದು ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ತಿಳಿಸಿದರು.