ಮಾರ್ಚ್ 31ರವರೆಗೆ ಈ ನಿರ್ಬಂಧ ಮುಂದುವರೆಯಲಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ರದ್ದು ಪಡಿಸಲಾಗಿದೆ. ಅಗತ್ಯ ಸೇವೆಗಳಿಗೆ ನಿರ್ಬಂಧವಿಲ್ಲ. ಎಲ್ಲ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಕಲಬುರ್ಗಿ, ಧಾರವಾಡ, ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯ ನಿರ್ಬಂಧ ಜಾರಿ ಮಾಡಲಾಗಿದೆ.