<p><strong>ಮಂಗಳೂರು: </strong>ರಾಜ್ಯದಲ್ಲಿ ಇದುವರೆಗೆ 10 ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.</p>.<p>ರಾಜ್ಯದಲ್ಲಿ 1.75 ಲಕ್ಷ ಜನರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿದೆ. 75 ಸಾವಿರ ಜನರಿಗೆ ಕ್ವಾರಂಟೇನ್ ಮಾಡಲಾಗಿದೆ. ಕಲಬುರ್ಗಿಯಲ್ಲಿ ಮೃತ ವ್ಯಕ್ತಿಯ ನಾಲ್ವರು ಸಂಬಂಧಿಕರ ಗಂಟಲು ದ್ರವ ಪರೀಕ್ಷಿಸಿದ್ದು, ಮೂವರಲ್ಲಿ ಸೋಂಕು ಇಲ್ಲ. ಒಬ್ಬರಲ್ಲಿ ಕೋವಿಡ್-19 ದೃಢಪಟ್ಟಿದೆ. ಕಲಬುರ್ಗಿಯಲ್ಲಿಯೇ ಇನ್ನೊಂದು ಪ್ರಕರಣವೂ ಇದೀಗ ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.</p>.<p><strong>ದೇವಸ್ಥಾನಗಳಲ್ಲಿ ಸೇವೆಗಳಿಗೆ ನಿರ್ಬಂಧ</strong></p>.<p>ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದೇವರ ಸೇವೆಗಳನ್ನು ರದ್ದುಪಡಿಸಲಾಗಿದೆ. ಭಕ್ತರು ದೇವರ ದರ್ಶನ ಮಾಡಬಹುದಾಗಿದ್ದು, ದೇವಸ್ಥಾನದ ಸಿಬ್ಬಂದಿ ಮಾತ್ರ ದೇವಸ್ಥಾನಗಳ ಉತ್ಸವಾದಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.</p>.<p>ಬೀಚ್ಗಳಲ್ಲೂ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಜನರು ಹೆಚ್ಚಾಗಿ ಸೇರುವುದನ್ನು ನಿರ್ಬಂಧಿಸುವ ಮೂಲಕ ಕೊರೊನಾ ಸೋಂಕು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಎಲ್ಲ ಜಿಲ್ಲೆಗಳಲ್ಲೂ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಕೇರಳದ ಗಡಿಗೆ ಹೊಂದಿಕೊಂಡಿರುವ ಮಂಗಳೂರಿನಲ್ಲಿ ಶೀಘ್ರದಲ್ಲಿ ಪ್ರಯೋಗಾಲಯ ಆರಂಭಿಸಲಾಗುವುದು ಎಂದು ಹೇಳಿದರು.</p>.<p>ಇದೇ 14 ರಂದು ದುಬೈನಿಂದ ಬಂದಿದ್ದ ಕೇರಳದ ವ್ಯಕ್ತಿಯಲ್ಲಿ ಕೋವಿಡ್ -19 ದೃಢಪಟ್ಟಿದೆ. ಈ ವ್ಯಕ್ತಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು, ಕೇರಳಕ್ಕೆ ತೆರಳಿರುವುದು ತಿಳಿದುಬಂದಿದೆ. ಹೀಗಾಗಿ ಎರಡೂ ರಾಜ್ಯಗಳ ಸರ್ವಲೆನ್ಸ್ ತಂಡಗಳು ಆ ವ್ಯಕ್ತಿಯ ಚಲನವಲನ ಹಾಗೂ ಆತ ಯಾರನ್ನು ಭೇಟಿ ಮಾಡಿದ್ದ, ಎಲ್ಲೆಲ್ಲಿ ಭೇಟಿ ನೀಡಿದ್ದ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.</p>.<p><strong>ರಜೆ ಮುಂದುವರಿಕೆ ಕುರಿತು ಶೀಘ್ರ ನಿರ್ಧಾರ</strong></p>.<p>ಕೊರೊನಾ ವೈರಸ್ ಸೋಂಕು ತಡೆಗಾಗಿ ಶಾಲಾ, ಕಾಲೇಜುಗಳು, ಮಾಲ್ ಗಳಿಗೆ ಘೋಷಿಸಿರುವ ರಜೆ ವಿಸ್ತರಣೆ ಕುರಿತು ಶೀಘ್ರದಲ್ಲಿ ನಿರ್ಧಾರಕ್ಕೆ ಬರಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಇಲ್ಲಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಭೇಟಿನೀಡಿ ಕೊರೊನಾ ವೈರಸ್ ಸೋಂಕು ತಗುಲಿದವರು ಮತ್ತು ಶಂಕಿತ ರೋಗಿಗಳ ಚಿಕಿತ್ಸೆಗಾಗಿ ಮಾಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಪತ್ರಕರ್ತರ ಜೊತೆ ಮಾತನಾಡಿದರು.</p>.<p>ಸೋಂಕು ಹರಡದಂತೆ ತಡೆಯಲು ಜನರು ಮನೆಯಲ್ಲೇ ಉಳಿಯುವುದು ಅಗತ್ಯ. ಈ ಕಾರಣದಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲ್ ಗಳನ್ನು ಬಂದ್ ಮಾಡಲಾಗಿದೆ. ಅಗತ್ಯ ಕಂಡುಬಂದಲ್ಲಿ ರಜೆ ಮತ್ತು ಬಂದ್ ಮುಂದುವರಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿ ಈ ಕುರಿತು ತೀರ್ಮಾನಕ್ಕೆ ಬರಲಾಗುವುದು ಎಂದರು.</p>.<p>ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದವರು ಮತ್ತು ಶಂಕಿತ ರೋಗಿಗಳ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ ಜನರು ತಕ್ಷಣವೇ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದರು.</p>.<p><strong>ಸಂಪರ್ಕದಲ್ಲಿದ್ದವರ ಪತ್ತೆಗೆ ಪ್ರಯತ್ನ</strong></p>.<p>ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಕಾಸರಗೋಡು ತಲುಪಿದ ಒಬ್ಬ ವ್ಯಕ್ತಿಯಲ್ಲಿ ಕೋವಿಡ್- 19 ಸೋಂಕು ಇರುವುದು ಖಚಿತವಾಗಿದೆ. ಆ ವ್ಯಕ್ತಿಯ ಜೊತೆ ವಿಮಾನದಲ್ಲಿ ಬಂದವರು ಮತ್ತು ನಂತರ ಸಂಪರ್ಕದಲ್ಲಿ ಇದ್ದವರ ಪತ್ತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದರು.</p>.<p>ಜನರು ಭಯಪಡುವ ಅಗತ್ಯ ಇಲ್ಲ. ಕೊರೊನಾ ವೈರಸ್ ತಗಿಲಿದ ಎಲ್ಲರಿಗೂ ಪ್ರಾಣಕ್ಕೆ ತೊಂದರೆ ಆಗುವುದಿಲ್ಲ. ಈ ರೋಗದಿಂದ ಮೃತರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಜನರು ಭಯಪಡುವ ಬದಲಿಗೆ ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ಪಾಲಿಸಬೇಕು ಎಂದು ವಿನಂತಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ರಾಜ್ಯದಲ್ಲಿ ಇದುವರೆಗೆ 10 ಕೋವಿಡ್ -19 ಪ್ರಕರಣ ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.</p>.<p>ರಾಜ್ಯದಲ್ಲಿ 1.75 ಲಕ್ಷ ಜನರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿದೆ. 75 ಸಾವಿರ ಜನರಿಗೆ ಕ್ವಾರಂಟೇನ್ ಮಾಡಲಾಗಿದೆ. ಕಲಬುರ್ಗಿಯಲ್ಲಿ ಮೃತ ವ್ಯಕ್ತಿಯ ನಾಲ್ವರು ಸಂಬಂಧಿಕರ ಗಂಟಲು ದ್ರವ ಪರೀಕ್ಷಿಸಿದ್ದು, ಮೂವರಲ್ಲಿ ಸೋಂಕು ಇಲ್ಲ. ಒಬ್ಬರಲ್ಲಿ ಕೋವಿಡ್-19 ದೃಢಪಟ್ಟಿದೆ. ಕಲಬುರ್ಗಿಯಲ್ಲಿಯೇ ಇನ್ನೊಂದು ಪ್ರಕರಣವೂ ಇದೀಗ ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.</p>.<p><strong>ದೇವಸ್ಥಾನಗಳಲ್ಲಿ ಸೇವೆಗಳಿಗೆ ನಿರ್ಬಂಧ</strong></p>.<p>ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ದೇವರ ಸೇವೆಗಳನ್ನು ರದ್ದುಪಡಿಸಲಾಗಿದೆ. ಭಕ್ತರು ದೇವರ ದರ್ಶನ ಮಾಡಬಹುದಾಗಿದ್ದು, ದೇವಸ್ಥಾನದ ಸಿಬ್ಬಂದಿ ಮಾತ್ರ ದೇವಸ್ಥಾನಗಳ ಉತ್ಸವಾದಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.</p>.<p>ಬೀಚ್ಗಳಲ್ಲೂ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಜನರು ಹೆಚ್ಚಾಗಿ ಸೇರುವುದನ್ನು ನಿರ್ಬಂಧಿಸುವ ಮೂಲಕ ಕೊರೊನಾ ಸೋಂಕು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ಎಲ್ಲ ಜಿಲ್ಲೆಗಳಲ್ಲೂ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಕೇರಳದ ಗಡಿಗೆ ಹೊಂದಿಕೊಂಡಿರುವ ಮಂಗಳೂರಿನಲ್ಲಿ ಶೀಘ್ರದಲ್ಲಿ ಪ್ರಯೋಗಾಲಯ ಆರಂಭಿಸಲಾಗುವುದು ಎಂದು ಹೇಳಿದರು.</p>.<p>ಇದೇ 14 ರಂದು ದುಬೈನಿಂದ ಬಂದಿದ್ದ ಕೇರಳದ ವ್ಯಕ್ತಿಯಲ್ಲಿ ಕೋವಿಡ್ -19 ದೃಢಪಟ್ಟಿದೆ. ಈ ವ್ಯಕ್ತಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು, ಕೇರಳಕ್ಕೆ ತೆರಳಿರುವುದು ತಿಳಿದುಬಂದಿದೆ. ಹೀಗಾಗಿ ಎರಡೂ ರಾಜ್ಯಗಳ ಸರ್ವಲೆನ್ಸ್ ತಂಡಗಳು ಆ ವ್ಯಕ್ತಿಯ ಚಲನವಲನ ಹಾಗೂ ಆತ ಯಾರನ್ನು ಭೇಟಿ ಮಾಡಿದ್ದ, ಎಲ್ಲೆಲ್ಲಿ ಭೇಟಿ ನೀಡಿದ್ದ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.</p>.<p><strong>ರಜೆ ಮುಂದುವರಿಕೆ ಕುರಿತು ಶೀಘ್ರ ನಿರ್ಧಾರ</strong></p>.<p>ಕೊರೊನಾ ವೈರಸ್ ಸೋಂಕು ತಡೆಗಾಗಿ ಶಾಲಾ, ಕಾಲೇಜುಗಳು, ಮಾಲ್ ಗಳಿಗೆ ಘೋಷಿಸಿರುವ ರಜೆ ವಿಸ್ತರಣೆ ಕುರಿತು ಶೀಘ್ರದಲ್ಲಿ ನಿರ್ಧಾರಕ್ಕೆ ಬರಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ಇಲ್ಲಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ ಭೇಟಿನೀಡಿ ಕೊರೊನಾ ವೈರಸ್ ಸೋಂಕು ತಗುಲಿದವರು ಮತ್ತು ಶಂಕಿತ ರೋಗಿಗಳ ಚಿಕಿತ್ಸೆಗಾಗಿ ಮಾಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಪತ್ರಕರ್ತರ ಜೊತೆ ಮಾತನಾಡಿದರು.</p>.<p>ಸೋಂಕು ಹರಡದಂತೆ ತಡೆಯಲು ಜನರು ಮನೆಯಲ್ಲೇ ಉಳಿಯುವುದು ಅಗತ್ಯ. ಈ ಕಾರಣದಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲ್ ಗಳನ್ನು ಬಂದ್ ಮಾಡಲಾಗಿದೆ. ಅಗತ್ಯ ಕಂಡುಬಂದಲ್ಲಿ ರಜೆ ಮತ್ತು ಬಂದ್ ಮುಂದುವರಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಿ ಈ ಕುರಿತು ತೀರ್ಮಾನಕ್ಕೆ ಬರಲಾಗುವುದು ಎಂದರು.</p>.<p>ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದವರು ಮತ್ತು ಶಂಕಿತ ರೋಗಿಗಳ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದರೆ ಜನರು ತಕ್ಷಣವೇ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದರು.</p>.<p><strong>ಸಂಪರ್ಕದಲ್ಲಿದ್ದವರ ಪತ್ತೆಗೆ ಪ್ರಯತ್ನ</strong></p>.<p>ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಕಾಸರಗೋಡು ತಲುಪಿದ ಒಬ್ಬ ವ್ಯಕ್ತಿಯಲ್ಲಿ ಕೋವಿಡ್- 19 ಸೋಂಕು ಇರುವುದು ಖಚಿತವಾಗಿದೆ. ಆ ವ್ಯಕ್ತಿಯ ಜೊತೆ ವಿಮಾನದಲ್ಲಿ ಬಂದವರು ಮತ್ತು ನಂತರ ಸಂಪರ್ಕದಲ್ಲಿ ಇದ್ದವರ ಪತ್ತೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದರು.</p>.<p>ಜನರು ಭಯಪಡುವ ಅಗತ್ಯ ಇಲ್ಲ. ಕೊರೊನಾ ವೈರಸ್ ತಗಿಲಿದ ಎಲ್ಲರಿಗೂ ಪ್ರಾಣಕ್ಕೆ ತೊಂದರೆ ಆಗುವುದಿಲ್ಲ. ಈ ರೋಗದಿಂದ ಮೃತರಾಗುವವರ ಪ್ರಮಾಣ ತೀರಾ ಕಡಿಮೆ ಇದೆ. ಜನರು ಭಯಪಡುವ ಬದಲಿಗೆ ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ಪಾಲಿಸಬೇಕು ಎಂದು ವಿನಂತಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>