<p><strong>ಬೆಳಗಾವಿ</strong>: ಇಲ್ಲಿನ ಕುವೆಂಪು ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಸ್ವಯಂ ಕ್ವಾರಂಟೈನ್ ಒಳಗಾಗುವ ಮೂಲಕ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕೊರೊನಾ ತಡೆ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.</p>.<p>ಲಕ್ಷ್ಮಿ ಅವರನ್ನು ಭೇಟಿಯಾಗಲು, ಅಹವಾಲು ಸಲ್ಲಿಸಲು ಪ್ರತಿದಿನ ಸಾವಿರಾರು ಜನರು ಬರುತ್ತಿದ್ದರು. ಲಾಕ್ಡೌನ್ ಅವಧಿಯಲ್ಲೂ ಜನರ ಓಡಾಟ ನಿಂತಿರಲಿಲ್ಲ. ಇದು ಅಕ್ಕಪಕ್ಕದ ನಿವಾಸಿಗಳಲ್ಲಿ ಭಯ, ಆತಂಕ ಮೂಡಿಸಿತ್ತು. ಕೆಲವರು ಇದರ ಬಗ್ಗೆ ಶಾಸಕಿಯವರ ಗಮನಕ್ಕೂ ತಂದಿದ್ದರು.</p>.<p>ಇದನ್ನು ಗಮನಿಸಿದ ಲಕ್ಷ್ಮಿ ಅವರು, ‘ಮನೆಯಿಂದ ಹೊರಗೆ ಬರಬೇಡಿ. ನಿಮ್ಮ ಆರೋಗ್ಯಕ್ಕೆ ಸಮಸ್ಯೆಯಾಗಬಹುದು. ಅಕ್ಕಪಕ್ಕದ ಜನರಿಗೂ ತೊಂದರೆಯಾಗಬಹುದು. ಇಲ್ಲಿಗೆ ಬರುವುದನ್ನು ನಿಲ್ಲಿಸಿ’ ಎಂದು ವಿನಂತಿಸಿಕೊಂಡರೂ ಜನರು ಬರುವುದು ಮುಂದುವರಿದಿತ್ತು.</p>.<p>ಇದನ್ನು ತಡೆಯುವ ಉದ್ದೇಶದಿಂದ ಅವರೇ ಸ್ವತಃ ಪೊಲೀಸರಿಗೆ ವಿನಂತಿಸಿಕೊಂಡು, ಮನೆಗೆ ಸಂಪರ್ಕ ಕಲ್ಪಿಸುವ ಎಲ್ಲ ದಾರಿಗಳಿಗೆ ಬ್ಯಾರಿಕೇಡ್ ಹಾಕಿಸಿ, ಬಂದ್ ಮಾಡಿಸಿದ್ದಾರೆ. ತಾವೇ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.</p>.<p>`ನಾನಿದ್ದಲ್ಲಿ ಬರುವುದು ಬೇಡ. ಇದರಿಂದ ನಿಮಗೆ ತೊಂದರೆಯಾಗಬಹುದು. ನೀವು ನಿಮ್ಮ ಮನೆಯಲ್ಲೇ ಇರಿ. ನಿಮ್ಮ ಗ್ರಾಮಗಳಿಗೆ ನಾನೇ ಬರುತ್ತೇನೆ. ನಿಮ್ಮ ಸಮಸ್ಯೆಯನ್ನು ಆಲಿಸುತ್ತೇನೆ. ಸಮಸ್ಯೆಗಳಿದ್ದಲ್ಲಿ ಫೋನ್ ಮಾಡಿದರೂ ಸ್ಪಂದಿಸುತ್ತೇನೆ' ಎಂದು ಲಕ್ಷ್ಮಿ ಹೆಬ್ಬಾಳಕರ್ ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಕುವೆಂಪು ನಗರದಲ್ಲಿರುವ ತಮ್ಮ ಮನೆಯಲ್ಲಿಯೇ ಸ್ವಯಂ ಕ್ವಾರಂಟೈನ್ ಒಳಗಾಗುವ ಮೂಲಕ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕೊರೊನಾ ತಡೆ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.</p>.<p>ಲಕ್ಷ್ಮಿ ಅವರನ್ನು ಭೇಟಿಯಾಗಲು, ಅಹವಾಲು ಸಲ್ಲಿಸಲು ಪ್ರತಿದಿನ ಸಾವಿರಾರು ಜನರು ಬರುತ್ತಿದ್ದರು. ಲಾಕ್ಡೌನ್ ಅವಧಿಯಲ್ಲೂ ಜನರ ಓಡಾಟ ನಿಂತಿರಲಿಲ್ಲ. ಇದು ಅಕ್ಕಪಕ್ಕದ ನಿವಾಸಿಗಳಲ್ಲಿ ಭಯ, ಆತಂಕ ಮೂಡಿಸಿತ್ತು. ಕೆಲವರು ಇದರ ಬಗ್ಗೆ ಶಾಸಕಿಯವರ ಗಮನಕ್ಕೂ ತಂದಿದ್ದರು.</p>.<p>ಇದನ್ನು ಗಮನಿಸಿದ ಲಕ್ಷ್ಮಿ ಅವರು, ‘ಮನೆಯಿಂದ ಹೊರಗೆ ಬರಬೇಡಿ. ನಿಮ್ಮ ಆರೋಗ್ಯಕ್ಕೆ ಸಮಸ್ಯೆಯಾಗಬಹುದು. ಅಕ್ಕಪಕ್ಕದ ಜನರಿಗೂ ತೊಂದರೆಯಾಗಬಹುದು. ಇಲ್ಲಿಗೆ ಬರುವುದನ್ನು ನಿಲ್ಲಿಸಿ’ ಎಂದು ವಿನಂತಿಸಿಕೊಂಡರೂ ಜನರು ಬರುವುದು ಮುಂದುವರಿದಿತ್ತು.</p>.<p>ಇದನ್ನು ತಡೆಯುವ ಉದ್ದೇಶದಿಂದ ಅವರೇ ಸ್ವತಃ ಪೊಲೀಸರಿಗೆ ವಿನಂತಿಸಿಕೊಂಡು, ಮನೆಗೆ ಸಂಪರ್ಕ ಕಲ್ಪಿಸುವ ಎಲ್ಲ ದಾರಿಗಳಿಗೆ ಬ್ಯಾರಿಕೇಡ್ ಹಾಕಿಸಿ, ಬಂದ್ ಮಾಡಿಸಿದ್ದಾರೆ. ತಾವೇ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.</p>.<p>`ನಾನಿದ್ದಲ್ಲಿ ಬರುವುದು ಬೇಡ. ಇದರಿಂದ ನಿಮಗೆ ತೊಂದರೆಯಾಗಬಹುದು. ನೀವು ನಿಮ್ಮ ಮನೆಯಲ್ಲೇ ಇರಿ. ನಿಮ್ಮ ಗ್ರಾಮಗಳಿಗೆ ನಾನೇ ಬರುತ್ತೇನೆ. ನಿಮ್ಮ ಸಮಸ್ಯೆಯನ್ನು ಆಲಿಸುತ್ತೇನೆ. ಸಮಸ್ಯೆಗಳಿದ್ದಲ್ಲಿ ಫೋನ್ ಮಾಡಿದರೂ ಸ್ಪಂದಿಸುತ್ತೇನೆ' ಎಂದು ಲಕ್ಷ್ಮಿ ಹೆಬ್ಬಾಳಕರ್ ವಿನಂತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>