ಕರ್ನಾಟಕ ಸರ್ಕಾರ ಕಾಸರಗೋಡು ಮತ್ತು ಮಂಗಳೂರು ನಡುವೆ ಸಂಚಾರ ಕಲ್ಪಿಸುವ ರಸ್ತೆಗೆ ಅಲ್ಪಾವಧಿ ತಡೆ ಹೇರಿತ್ತು. ಅದು ದಕ್ಷಿಣ ಕನ್ನಡ ಜನರ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಉತ್ತಮ ತೀರ್ಮಾನವಾಗಿತ್ತು. ಆದರೆ, ಕೇರಳ ಹೈಕೋರ್ಟ್ ಈ ರಸ್ತೆ ತಡೆಯನ್ನು ತೆರವುಗೊಳಿಸಲು ಸೂಚನೆ ನೀಡಿದೆ. ಇದರ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಬೇಕೆಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.