ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಆಪ್ತಮಿತ್ರ ಸಹಾಯವಾಣಿಗೆ ಚಾಲನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

Last Updated 21 ಏಪ್ರಿಲ್ 2020, 9:53 IST
ಅಕ್ಷರ ಗಾತ್ರ

ಮೈಸೂರು: ರಾಜ್ಯ ಸರ್ಕಾರವು ಇನ್ಫೊಸಿಸ್‌ ಜೊತೆ ಒಡಂಬಡಿಕೆ ಮಾಡಿಕೊಂಡು ಬುಧವಾರ ‘ಆಪ್ತಮಿತ್ರ ಸಹಾಯವಾಣಿ’ ಆರಂಭಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಇನ್ಫೊಸಿಸ್‌ ಈ ಆ್ಯಪ್‌ ಅಭಿವೃದ್ಧಿಪಡಿಸಿದೆ. ಈ ಕೇಂದ್ರದಲ್ಲಿ 2 ಸಾವಿರ ಮಂದಿ ಕಾರ್ಯನಿರ್ವಹಿಸಲಿದ್ದಾರೆ. ವೈದ್ಯಕೀಯ ಕ್ಷೇತ್ರದ ಪರಿಣತರು, ವೈದ್ಯರು, ನರ್ಸ್‌ಗಳು ಇರಲಿದ್ದಾರೆ. ರಾಜ್ಯದ ಯಾವುದೇ ಮೂಲೆಯಿಂದ ಜನರು ಈ ಕೇಂದ್ರಕ್ಕೆ (14410 ಸಂಖ್ಯೆ) ಕರೆ ಮಾಡಿ ಸಹಾಯ ಪಡೆಯಬಹುದು ಎಂದರು.

ನೆಗಡಿ, ಜ್ವರ, ಕೆಮ್ಮು ಇದ್ದವರು ನೆರವು ಪಡೆಯಬಹುದು. ಟೆಲಿ ಮೆಡಿಷನ್‌ ಸೌಲಭ್ಯವೂ ಇರಲಿದೆ. ಈ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಂಗಳೂರಿನಲ್ಲಿ ಬುಧವಾರ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT