ಬೆಂಗಳೂರು: ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ಲಾಸ್ಮಾ ಥೆರಪಿಯನ್ನು ಮೊದಲ ರೋಗಿಗೆ ಮಾಡಲಿದ್ದೇವೆ. ಥೆರಪಿಗೆ ದಾನಿಯೂ ಸಿಕ್ಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
'ರಾಜ್ಯದ ಮೊದಲ ಪ್ಲಾಸ್ಮಾ ಥೆರಪ ಇದಾಗಲಿದೆ' ಎಂದು ಅವರು ಶುಕ್ರವಾರ ಇಲ್ಲಿ ಕೇಂದ್ರದ ಆರೋಗ್ಯ ಸಚಿವರೊಂದಿಗೆ ವಿಡಿಯೊ ಸಂವಾದ ನಡೆಸಿದ ಬಳಿದ ಸುದ್ದಿಗಾರರಿಗೆ ತಿಳಿಸಿದರು.
ಕೊರೊನಾ ಸೋಂಕು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯ ಇಲ್ಲ. ಬಹಳ ಜನ ಕೊರೊನಾ ಸೋಂಕು ದೃಢಪಟ್ಟರೆ ಕಳಂಕ ಎಂದು ತಿಳಿದುಕೊಂಡಿದ್ದಾರೆ. ಕೊರೊನಾ ಸಹ ಬೇರೆ ವೈರಸ್ ಥರ ಒಂದು ವೈರಸ್. ಅದರಿಂದ ಸಹಜ ಜ್ವರ ಹೇಗೆ ಬರುತ್ತೋ ಇದೂ ಕೂಡಾ ಹಾಗೆ. ಶೇ.97 ಕೊರೊನಾ ಸೋಂಕಿತರು ವಾಸಿಯಾಗಿದ್ದಾರೆ ಎಂದು ಸುಧಾಕರ್ ಹೇಳಿದರು.
'ರಾಜ್ಯದಲ್ಲಿ ಎರಡೂವರೆ ತಿಂಗಳಾದ್ರೂ 445 ಅಷ್ಟೇ ಪ್ರಕರಣಗಳ ವರದಿಯಾಗಿದೆ. ಈ ಪೈಕಿ 200 ಕ್ಕೂ ಹೆಚ್ಚು ಜನರಿಗೆ ವಾಸಿಯಾಗಿದೆ' ಎಂದರು.