ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ನನ್ನ ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೊರೊನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅವರು ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ' ಎಂದಿದ್ದಾರೆ.