ಉಮೇಶ ಕತ್ತಿ ಮಾತನಾಡಿ, ‘ನಮ್ಮಕ್ಷೇತ್ರಕ್ಕೆ ಒಂದೇ ಒಂದೂ ಕಿಟ್ ಬಂದಿಲ್ಲ’ ಎಂದು ಹೇಳಿದರು. ಇದಕ್ಕೆ ಧ್ವನಿಗೂಡಿಸಿದ ರವಿ
ಸುಬ್ರಹ್ಮಣ್ಯ, ‘ನಮ್ಮ ಕ್ಷೇತ್ರಕ್ಕೆ ನಾಲ್ಕು ಸಾವಿರ ಕಿಟ್ ಪಡೆಯಲು ಹರಸಾಹಸಪಡಬೇಕಾಯಿತು’ ಎಂದು ಹೇಳಿದರು.
‘ಒಂದು ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ ₹5,000 ಪರಿಹಾರ ಧನವನ್ನು ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ ಇದಕ್ಕೆ ದಾಖಲೆಗಳೇ ಇಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಮೂಲಗಳು ತಿಳಿಸಿವೆ.