ಮೃತ 54 ವರ್ಷದ ವ್ಯಕ್ತಿ ಕುಂದಾಪುರ ತಾಲ್ಲೂಕಿನವರಾಗಿದ್ದು, ಈಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮೇ 13ರಂದು ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೇ 14ರಂದು ಸಂಜೆ ವ್ಯಕ್ತಿ ಮೃತಪಟ್ಟಿದ್ದರು ಎಂದು ಡಾ.ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.