ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಪ್ರಧಾನ ಮಂತ್ರಿ ನರೇಂದ್ರಮೋದಿ ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ರಾಜ್ಯದಾದ್ಯಂತಬೆಂಬಲ ವ್ಯಕ್ತವಾಗಿದ್ದು, ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಬಹುತೇಕ ಕಾರ್ಯಾಚರಣೆಸಂಪೂರ್ಣ ಸ್ಥಗಿತವಾಗುವ ಸಾಧ್ಯತೆ ಇದೆ. ಜನರು ಗುಂಪು ಗೂಡದರಿರುವುದು, ಅನಗತ್ಯ ಸಂಚಾರ ನಿಲ್ಲಿಸುವುದು ಹಾಗೂ ಮನೆಯಲ್ಲಿಯೇ ಉಳಿಯುವ ಮೂಲಕ ಸೋಂಕು ವ್ಯಾಪಿಸುವುದನ್ನು ತಡೆಯುವಂತೆ ಸರ್ಕಾರ ಸಲಹೆ ನೀಡುತ್ತಿದೆ.