ಬೆಂಗಳೂರು: ಏಪ್ರಿಲ್ 22ರ ಸಂಜೆ 5ರಿಂದ ಏಪ್ರಿಲ್ 23ರ ಮಧ್ಯಾಹ್ನ 12ರ ವರೆಗೂ ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 16 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೊನಾ ವೈರಸ್ ಸೋಂಕು ಪ್ರಕರಣಗಳು 443 ತಲುಪಿದ್ದು, ಸೋಂಕಿನಿಂದ 17 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಪ್ರಕರಣಗಳ ಪೈಕಿ 141 ಜನ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರದ ಹೊಂಗಸಂದ್ರದಲ್ಲಿ 9 ಹೊಸ ಪ್ರಕರಣಗಳು ವರದಿಯಾಗಿವೆ. ಮಂಡ್ಯ, ಹುಬ್ಬಳ್ಳಿ ಹಾಗೂ ವಿಜಯಪುರದಲ್ಲಿ ತಲಾ ಇಬ್ಬರು, ಹಾಗೂ ಬಂಟ್ವಾಳದ ಒಬ್ಬರಿಗೆ ಕೋವಿಡ್–19 ದೃಢಪಟ್ಟಿದೆ.