<p>ಹಾವೇರಿ: ಲಾಕ್ಡೌನ್ ಜಾರಿಯಲ್ಲಿದ್ದರೂ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ ಸಗರಿ ಅವರು ಅಭಿಮಾನಿಗಳ ಮಧ್ಯೆ ಕೇಕ್ ಕತ್ತರಿಸಿ, ತಮ್ಮ ಜನ್ಮದಿನ ಆಚರಿಸಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. </p>.<p>ರಾಣೆಬೆನ್ನೂರು ತಾಲ್ಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಮಾರ್ಚ್ 22ರಂದು ಸುರೇಶ ಸಗರಿ ನೇತೃತ್ವದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಪಥಸಂಚಲನ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಕೂಡ ಹೂ ಮಳೆ ಸುರಿದು ಅದ್ಧೂರಿಯಾಗಿ ಸ್ವಾಗತಿಸಿದ್ದರು.</p>.<p>ನಂತರ ಅವರ ಅಭಿಮಾನಿಗಳಿಂದ ಗ್ರಾಮ ಪಂಚಾಯ್ತಿ ಎದುರು ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಗುಂಪುಗೂಡಿ ಜನ್ಮದಿನ ಆಚರಿಸಿದ್ದರು. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಕಾನೂನು ಪಾಲಿಸಬೇಕಾದ ಪೊಲೀಸ್ ಅಧಿಕಾರಿಯೇ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಗ್ರಾಮಸ್ಥರು ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಸಿಪಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ರೂಟ್ ಮಾರ್ಚ್ ನಡೆದ ದಿನದಂದೇ ಸುರೇಶ ಸಗರಿ ಅವರ ಜನ್ಮದಿನಾಚರಣೆ ಇತ್ತು. ಅಭಿಮಾನಿಗಳು ಏಕಾಏಕಿ ಕೇಕ್ ತಂದು ಕತ್ತರಿಸಿ ಆಚರಣೆಗೆ ಒತ್ತಾಯಿಸಿದ್ದಾರೆ. ಸುರೇಶ್ ಒಪ್ಪದಿದ್ದರೂ ಅಭಿಮಾನಿಗಳು ಬಿಟ್ಟಿಲ್ಲ’ ಎಂದು ಡಿವೈಎಸ್ಪಿ ಟಿ.ವಿ.ಸುರೇಶ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಲಾಕ್ಡೌನ್ ಜಾರಿಯಲ್ಲಿದ್ದರೂ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ ಸಗರಿ ಅವರು ಅಭಿಮಾನಿಗಳ ಮಧ್ಯೆ ಕೇಕ್ ಕತ್ತರಿಸಿ, ತಮ್ಮ ಜನ್ಮದಿನ ಆಚರಿಸಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. </p>.<p>ರಾಣೆಬೆನ್ನೂರು ತಾಲ್ಲೂಕಿನ ಮೇಡ್ಲೇರಿ ಗ್ರಾಮದಲ್ಲಿ ಮಾರ್ಚ್ 22ರಂದು ಸುರೇಶ ಸಗರಿ ನೇತೃತ್ವದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಪಥಸಂಚಲನ ಏರ್ಪಡಿಸಲಾಗಿತ್ತು. ಗ್ರಾಮಸ್ಥರು ಕೂಡ ಹೂ ಮಳೆ ಸುರಿದು ಅದ್ಧೂರಿಯಾಗಿ ಸ್ವಾಗತಿಸಿದ್ದರು.</p>.<p>ನಂತರ ಅವರ ಅಭಿಮಾನಿಗಳಿಂದ ಗ್ರಾಮ ಪಂಚಾಯ್ತಿ ಎದುರು ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಗುಂಪುಗೂಡಿ ಜನ್ಮದಿನ ಆಚರಿಸಿದ್ದರು. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.</p>.<p>ಕಾನೂನು ಪಾಲಿಸಬೇಕಾದ ಪೊಲೀಸ್ ಅಧಿಕಾರಿಯೇ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಗ್ರಾಮಸ್ಥರು ದಾವಣಗೆರೆ ಪೂರ್ವ ವಲಯ ಐಜಿಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಸಿಪಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ರೂಟ್ ಮಾರ್ಚ್ ನಡೆದ ದಿನದಂದೇ ಸುರೇಶ ಸಗರಿ ಅವರ ಜನ್ಮದಿನಾಚರಣೆ ಇತ್ತು. ಅಭಿಮಾನಿಗಳು ಏಕಾಏಕಿ ಕೇಕ್ ತಂದು ಕತ್ತರಿಸಿ ಆಚರಣೆಗೆ ಒತ್ತಾಯಿಸಿದ್ದಾರೆ. ಸುರೇಶ್ ಒಪ್ಪದಿದ್ದರೂ ಅಭಿಮಾನಿಗಳು ಬಿಟ್ಟಿಲ್ಲ’ ಎಂದು ಡಿವೈಎಸ್ಪಿ ಟಿ.ವಿ.ಸುರೇಶ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>