ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಒತ್ತೆ ಪ್ರಕರಣ: ಮೂವರ ಬಂಧನ

Last Updated 18 ಜೂನ್ 2019, 17:48 IST
ಅಕ್ಷರ ಗಾತ್ರ

ಮೈಸೂರು: ಸಾಲ ಪಡೆದಿದ್ದ ವ್ಯಕ್ತಿಯ 15 ವರ್ಷದ ಪುತ್ರಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕುವೆಂಪುನಗರ ಠಾಣೆಯ ಪೊಲೀಸರು, ಒಬ್ಬ ಕಾನ್‌ಸ್ಟೆಬಲ್‌ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಕುವೆಂಪುನಗರ ಸಂಚಾರ ಠಾಣೆಯ ಕಾನ್‌ಸ್ಟೆಬಲ್‌ ಮಹೇಶ್, ಪದ್ಮಾ ಮತ್ತು ಪ್ರಸನ್ನಕುಮಾರ್ ಬಂಧಿತರು.

‘ಪದ್ಮಾ ಮತ್ತು ಪ್ರಸನ್ನಕುಮಾರ್ ಬಾಲಕಿಯ ತಂದೆಗೆ ₹6 ಲಕ್ಷ ಸಾಲವನ್ನು ಮೀಟರ್‌ ಬಡ್ಡಿಗೆ ನೀಡಿದ್ದರು. ಸಾಲ ಮತ್ತು ಬಡ್ಡಿಯ ಹಣ ವಾಪಸ್‌ ಮಾಡಲಿಲ್ಲ ಎಂಬ ಕಾರಣಕ್ಕೆ 6 ತಿಂಗಳುಗಳಿಂದ ಬಾಲಕಿಯನ್ನು ತಮ್ಮ ಮನೆಯಲ್ಲಿರಿಸಿಕೊಂಡಿದ್ದರು.ಈ ವೇಳೆ ಆಕೆಯನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗಿತ್ತು‘ ಎಂದು ಆರೋಪಿಸಲಾಗಿತ್ತು. ಪ್ರಕರಣದ ಅರಿವಿದ್ದರೂ ಮೇಲಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ ಎಂಬ ಆರೋಪದಲ್ಲಿ ಮಹೇಶ್‌ನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT