ಚಾರ್ಮಾಡಿಘಾಟಿಯಲ್ಲಿ ಘನ ವಾಹನಗಳು ತೆರಳದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ಜಿಲ್ಲಾಡಳಿತದ ಆದೇಶಕ್ಕೆ ಕಿಮ್ಮತ್ತು ಬೆಲೆ ನೀಡದ ಘನವಾಹನಗಳ ಚಾಲಕರು, ಎಗ್ಗಿಲ್ಲದೇ ರಸ್ತೆಯಲ್ಲಿ ಸಾಗುತ್ತಿದ್ದಾರೆ. ಕೊಟ್ಟಿಗೆಹಾರ, ಚಾರ್ಮಾಡಿಗಳಲ್ಲಿ ಸಿಸಿ ಕ್ಯಾಮೆರಾದ ಕಣ್ಗಾವಲಿದ್ದರೂ, ಹಣದ ಆಸೆಗೆ ಬಲಿಯಾಗಿ ಸಿಬ್ಬಂದಿ ಘನ ವಾಹನಗಳು ಹಾಗೂ ಹುಲ್ಲಿನ ಲಾರಿಗಳು ಸಂಚರಿಸಲು ಅವಕಾಶ ಕಲ್ಪಿಸಿದ್ದಾರೆ ಎಂಬುದು ಜನರ ಆರೋಪ.