ಚಾರಣಿಗರ 12 ಮಂದಿ ತಂಡ ಶುಕ್ರವಾರ ಸುಬ್ರಹ್ಮಣ್ಯದ ದೇವರಗದ್ದೆ ಮಾರ್ಗವಾಗಿ ಕುಮಾರ ಪರ್ವತಕ್ಕೆ ಚಾರಣ ಆರಂಭಿಸಿತ್ತು. ಗಿರಿಗದ್ದೆಯಲ್ಲಿ ತಂಗಿದ್ದ ತಂಡ ಭಾನುವಾರ ಶೇಷ ಪರ್ವತ ತನಕ ಚಾರಣ ಮಾಡಿ ವಾಪಸ್ಸಾಗಿತ್ತು. ಸಂಜೆ 4.30 ರ ವೇಳೆಗೆ ಗಿರಿಗದ್ದೆ ಭಟ್ರ ಮನೆಯಲ್ಲಿ ಊಟ ಮಾಡಿ ತಂಡವು ವಾಪಸ್ ಊರಿಗೆ ಹೊರಟಿದ್ದರು.ತಂಡದಲ್ಲಿದ್ದ 5 ಮಂದಿ ಮೊದಲಿಗೆ ಹೊರಟು ಬಂದಿದ್ದು ನಂತರ ಸಂತೋಷ್ ಒಬ್ಬರೇ ಬಂದಿದ್ದ ಅವರ ಹಿಂದಿಂದ 6 ಮಂದಿ ಬರುತಿದ್ದರು. ಈ ನಡುವೆ ಮದ್ಯದಲ್ಲಿದ್ದ ವ್ಯಕ್ತಿ ಕೇವಲ 10 ನಿಮಿಷ ಅಂತರದಲ್ಲಿ ಕಾಣೆಯಾಗಿದ್ದಾರೆ.