ಬೆಂಗಳೂರು: ಕ್ರಿಮಿನಲ್ ಪ್ರಕರಣದಲ್ಲಿ ಕೋರ್ಟ್ಗೆ ಸತತ ಗೈರು ಹಾಜರಾದ ಕಾರಣ ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಇಲ್ಲಿನ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಅದೇಶಿಸಿದೆ.
ಪ್ರಕರಣವೇನು?: 2011 ರಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಕಳೆದುಕೊಂಡಾಗ ಈಶ್ವರಪ್ಪ ಕರ್ನಾಟಕ ಬಂದ್ಗೆ ಕರೆ ನೀಡಿದ್ದರು. ಇದನ್ನು ಪ್ರಶ್ನೆ ಮಾಡಿ ಹೈಕೋರ್ಟ್ ವಕೀಲ ಧರ್ಮಪಾಲ್ ಅವರು ಖಾಸಗಿ ದೂರು ಸಲ್ಲಿಸಿದ್ದರು.
ಸಿಟಿ ಸಿವಿಲ್ ಕೋರ್ಟ್ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಆದೇಶಿಸಲಾಗಿದೆ. ನವೆಂಬರ್ 24ಕ್ಕೆ ವಿಚಾರಣೆಗೆ ಕೋರ್ಟ್ಗೆ ಖುದ್ದು ಹಾಜರಾಗಲು ಆದೇಶಿಸಲಾಗಿದೆ.