ಬೆಳಗಾವಿ: ‘ಪ್ರವಾಹದಿಂದ ಸಂಭವಿಸಿದ ಬೆಳೆ ನಷ್ಟಕ್ಕೆ ನೀಡಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ. ಪ್ರತಿ ಹೆಕ್ಟೇರ್ ಒಣಭೂಮಿಗೆ ₹ 16,500, ನೀರಾವರಿ ಭೂಮಿಗೆ ₹ 23,500 ಹಾಗೂ ತೋಟಗಾರಿಕಾ ಬೆಳೆಗಳಿಗೆ ₹ 28,000 ನೀಡಲು ತೀರ್ಮಾನಿಸಲಾಗಿದೆ. ಇದು ದೇಶದಲ್ಲಿಯೇ ಅತಿ ಹೆಚ್ಚಿನ ದರವಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.