ದಾವಣಗೆರೆ/ಚಿತ್ರದುರ್ಗ: ಲಾಕ್ಡೌನ್ ಆರಂಭದಲ್ಲಿ ಕೃಷಿ ವಸ್ತುಗಳ ಮಾರಾಟಕ್ಕೆ ತೊಂದರೆಯಾಗಿತ್ತು. ಹಾಗಾಗಿ ರೈತರು ತಾವು ಬೆಳೆದ ಬೆಳೆಯನ್ನು ನಾಶ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ನಾಶವಾದರೆ ಮಾತ್ರ ಪರಿಹಾರ ನೀಡಲಾಗುತ್ತದೆ. ಸ್ವತಃ ನಾಶ ಮಾಡಿದ ಬೆಳೆಗೆ ಪರಿಹಾರ ಸಿಗದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು.