ರವಿ ಅವರು ಮಂಗಳವಾರ ಮಠಕ್ಕೆ ಭೇಟಿ ನೀಡಿದಾಗ ಸ್ವಾಮೀಜಿ, ‘ಗಂಡಸರು ಹೇಗೋ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಆದರೆ, ಹೆಣ್ಣು ಮಕ್ಕಳು ಶೌಚಾಲಯಕ್ಕೆ ಎಲ್ಲಿಗೆ ಹೋಗಬೇಕು? ಪುರಾತತ್ವ ಇಲಾಖೆಯ ಅಧಿಕಾರಿಗಳು ಎಲ್ಲದಕ್ಕೂ ಕಿರಿಕಿರಿ ಮಾಡುತ್ತಾರೆ. ಹಂಪಿಗೆ ಬರುವ ಪ್ರವಾಸಿಗರಿಗೆ ಮೂಲ ಸೌಲಭ್ಯಗಳನ್ನೇ ಕೊಡುವುದಿಲ್ಲ ಎಂದರೆ ಏನರ್ಥ’ ಎಂದು ಪ್ರಶ್ನಿಸಿದರು.