ಬಿಡುಗಡೆಯಾಗಿರುವ ವಿಡಿಯೋ ಅಸಲಿಯತ್ತನ್ನು ಕಾಂಗ್ರೆಸ್ ಪ್ರಶ್ನಿಸಿದೆ ಎಂಬುದಕ್ಕೆ ಉತ್ತರಿಸಿದ ಅವರು, ‘ಸೇನೆ, ತಾಯಿ ಬಗ್ಗೆ ಅನುಮಾನಪಡುವಂಥವರು ಇಂಥ ಪ್ರಶ್ನೆಗಳನ್ನು ಎತ್ತುತ್ತಾರೆ. ಈ ಹಿಂದೆ ಮತಯಂತ್ರಗಳ(ಇವಿಎಂ) ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದರು. ಜಾರ್ಖಂಡ್ನಲ್ಲಿ ಬಿಜೆಪಿ ಸೋತಿದೆ, ಜನಾದೇಶ ಎಂದು ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ ಸೋತಿದ್ದರೆ ಇವಿಎಂ ಮೇಲೆ ಗೂಬೆ ಕೂರಿಸುತ್ತಿದ್ದರು’ ಎಂದು ವ್ಯಂಗ್ಯವಾಡಿದರು.