ಸಿಯುಕೆಗೆ ಅಂಬೇಡ್ಕರ್ ಹೆಸರಿಡುವ ಕುರಿತು 2017ರಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರಡ್ಡಿ ಅವರು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಸ್ಪಂದನೆ ದೊರೆತಿರಲಿಲ್ಲ. ಉನ್ನತ ಶಿಕ್ಷಣ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಈಗ ಮರು ಪ್ರಸ್ತಾವ ಸಲ್ಲಿಸಿದ್ದು, ವಿಶ್ವವಿದ್ಯಾಲಯಗಳ ಮರುನಾಮಕರಣ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.