ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮದ ಕುರಿತು ‘ಸೈಬರ್ ಟೆಂಡರ್ ಅಕ್ರಮ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ಮಂಗಳವಾರ ವಿಶೇಷ ವರದಿ ಪ್ರಕಟಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ, ‘ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.