ಹುಬ್ಬಳ್ಳಿ: ಮಹಿಳಾ ಸಬಲೀಕರಣದ ಸಂದೇಶ ಸಾರಲು ಬೆಳಗಾವಿಯಿಂದ ಬೆಂಗಳೂರಿಗೆ ಹೊರಟ ಕೆಎಸ್ಆರ್ಪಿ ಸಿಬ್ಬಂದಿ ಹಾಗೂ ಐಎಸ್ಐಪಿಎಸ್ ಅಧಿಕಾರಿಗಳ ಸೈಕಲ್ಜಾಥಾಕ್ಕೆ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮಿಷನರ್ ಎಂ.ಎನ್. ನಾಗರಾಜ ಗುರುವಾರ ಹಸಿರು ನಿಶಾನೆ ತೋರಿದರು.
ಎಡಿಜಿಪಿ ಭಾಸ್ಕರ್ ರಾವ್ಮಾತನಾಡಿ, ಮಹಿಳಾ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ಆಯೋಜಿಸಲಾಗಿದೆ. ಕೆಎಸ್ಆರ್ಪಿಯ 46 ಸಿಬ್ಬಂದಿ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದಾರೆ. ಜಾಥಾಕ್ಕೆ ಜನರಿಂದ ಹಾಗೂ ಸಂಘ ಸಂಸ್ಥೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
'ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಾದರೆ ದೇಶ ಪ್ರಗತಿ ಕಾಣಲಿದೆ. ಮುಖ್ಯವಾಗಿ ನಾವು ಶಿಕ್ಷಣದ ಮಹತ್ವ ಅವಕಾಶ ಹಾಗೂ ಸವಾಲುಗಳಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ದಾರಿ ಮಧ್ಯದಲ್ಕಿ ಶಾಲೆ ಹಾಗೂ ಖಾಸಗಿ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇವೆ' ಎಂದು ಐಎಎಸ್ ಅಧಿಕಾರಿ ನಂದಿನಿ ಹೇಳಿದರು.