ಸಮುದ್ರ ತೀರದಿಂದ ಮುಖ್ಯರಸ್ತೆಗೆ ಹೋಗುವ ದಾರಿಯಲ್ಲಿ ಹೊಸದಾಗಿ ಕಟ್ಟಿದ ಅಂಗಡಿಯ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು,ಅಪಾರ ನಷ್ಟವಾಗಿದೆ. ಬಿಜ್ಜೂರು, ರುದ್ರಪಾದ ಸೇರಿದಂತೆ ಸಮುದ್ರದ ಬದಿಯಲ್ಲಿ ಹಲವು ಮರಗಳು ಗಾಳಿಯ ರಭಸಕ್ಕೆ ಮುರಿದು ಬಿದ್ದವು. ಲಾಕ್ಡೌನ್ ಸಂದರ್ಭದಲ್ಲಿ ವಾಹನ ಮತ್ತು ಜನರ ಸಂಚಾರ ನಿಯಂತ್ರಿಸಲು ಪೊಲೀಸರು ರಸ್ತೆ ಬದಿ ಇರಿಸಿದ್ದ ಬ್ಯಾರಿಕೇಡ್ಗಳು, ಅವರಿಗೆ ನೆರಳಿಗೆಂದು ಅಳವಡಿಸಿದ್ದ ಟೆಂಟ್ಗಳು ಗಾಳಿಯ ರಭಸಕ್ಕೆ ದೂರ ಹಾರಿ ಹೋದವು. ಕಾರವಾರದಲ್ಲಿ ದಿನವಿಡೀ ವಿದ್ಯುತ್ ಪೂರೈಕೆ ಸ್ಥಗಿತವಾಗಿ ನಾಗರಿಕರುತೊಂದರೆಗೀಡಾದರು.