‘ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ಎನ್ಸಿಆರ್ವಿರುದ್ಧ ಯುವಕರು, ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು, ಬುದ್ಧಿಜೀವಿಗಳು, ವಿದ್ಯಾವಂತರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ, ಯಾವುದೇ ಪಕ್ಷದ ಸದಸ್ಯರೂ ಅಲ್ಲ. ಯಾವ ಪಕ್ಷವೂ ಈ ರೀತಿ ಮಾಡಿ ಅಂತಾ ನಿರ್ದೇಶನ ಕೊಟ್ಟಿಲ್ಲ. ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಮಾಡುತ್ತಿವೆ. ಪ್ರಧಾನಿ ಅವರು ಇಂತಹ ಹೋರಾಟಗಾರರನ್ನುನಗರ ನಕ್ಸಲರು ಎಂದು ಕರೆದು ಅವಮಾನಿಸಿದ್ದು, ದೊಡ್ಡ ದೇಶದ್ರೋಹ’ ಎಂದರು.