ಸಂಜೆ 4.45ಕ್ಕೆ ದೆಹಲಿ ತಲುಪಿದ ಶಿವಕುಮಾರ್ ಅಲ್ಲಿಂದ ನೇರವಾಗಿ ಕರ್ನಾಟಕ ಭವನಕ್ಕೆ ಬಂದರು. ವಕೀಲರ ಅಭಿಪ್ರಾಯ ಪಡೆಯುವ ಸಲುವಾಗಿ ಅಲ್ಲಿಂದ ಕೂಡಲೇ ಸಂಸದ ಡಿ.ಕೆ. ಸುರೇಶ ಅವರ ನಿವಾಸಕ್ಕೆ ತೆರಳಿದ ಅವರು, ಅರ್ಧ ಗಂಟೆ ಚರ್ಚೆ ನಡೆಸಿ ವಿಚಾರಣೆಗಾಗಿ ಲೋಕ ಕಲ್ಯಾಣ ಭವನದತ್ತ ಧಾವಿಸಿದರು. ರಾತ್ರಿ 11.50ರವರೆಗೆ ವಿಚಾರಣೆ ನಡೆಯಿತು.