<p><strong>ಬೆಂಗಳೂರು:</strong> ‘ನಮ್ಮ ರಾಜ್ಯದ ಧ್ವನಿಯಾಗಿ ಎಚ್.ಡಿ.ದೇವೇಗೌಡರು ಸಂಸತ್ಗೆ ಹೊಗಬೇಕೆಂದು ನನ್ನ ಆಶಯ. ಒಂದು ವೇಳೆ ಅವರು ರಾಜ್ಯಸಭೆಗೆ ಹೊಗಲು ಒಪ್ಪಿದರೆ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ನನಗೆ ಯಾವುದೆ ಅಸಮಾಧಾನ ಇಲ್ಲ’ ಎಂದು ಜೆಡಿಎಸ್ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹೇಳಿದರು.</p>.<p>ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಮಹಿಳಾ ವಿಭಾಗ, ಅಲ್ಪಸಂಖ್ಯಾತ ವಿಭಾಗ, ಕಾರ್ಮಿಕ ವಿಭಾಗದ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p>ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಠ 70 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಹೀಗಾಗಿ ಈಗಿನಿಂದಲೆ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಟಿಕೆಟ್ ಆಕಾಂಕ್ಷಿಗಳು ನಾಳೆಯಿಂದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಬಹುದು<br />ಪ್ರತಿ ವಾರ್ಡ್ನಲ್ಲೂ ಪಕ್ಷದ ಕಚೇರಿ ತೆರೆಯಲು ವಾರ್ಡ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದೇವೆ. ವಾರ್ಡ್ ಮಟ್ಟದಲ್ಲಿ ಪಕ್ಷ ಸದೃಢ ಮಾಡಲು ಇವತ್ತಿನಿಂದಲೇ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ರೆಡ್ಡಿ ಹೇಳಿದರು.</p>.<p><strong>ಸಿಎಎ ಖಂಡಿಸಿ ಪ್ರತಿಭಟನೆಗೆ ನಿರ್ಧಾರ: </strong>ಪೌರತ್ವ ತಿದ್ದುಪಡಿ ಕಾಯ್ದೆ ಖಂಡಿಸಿ ಇದೇ 24 ರಂದು ಟೌನ್ಹಾಲ್ ಬಳಿ ಬೆಂಗಳೂರು ಜೆಡಿಎಸ್ ವಿಭಾಗದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲು ಸಭೆಯಲ್ಲಿ ತಿರ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ರಾಜ್ಯದ ಧ್ವನಿಯಾಗಿ ಎಚ್.ಡಿ.ದೇವೇಗೌಡರು ಸಂಸತ್ಗೆ ಹೊಗಬೇಕೆಂದು ನನ್ನ ಆಶಯ. ಒಂದು ವೇಳೆ ಅವರು ರಾಜ್ಯಸಭೆಗೆ ಹೊಗಲು ಒಪ್ಪಿದರೆ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ನನಗೆ ಯಾವುದೆ ಅಸಮಾಧಾನ ಇಲ್ಲ’ ಎಂದು ಜೆಡಿಎಸ್ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹೇಳಿದರು.</p>.<p>ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಮಹಿಳಾ ವಿಭಾಗ, ಅಲ್ಪಸಂಖ್ಯಾತ ವಿಭಾಗ, ಕಾರ್ಮಿಕ ವಿಭಾಗದ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.</p>.<p>ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಠ 70 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಹೀಗಾಗಿ ಈಗಿನಿಂದಲೆ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಟಿಕೆಟ್ ಆಕಾಂಕ್ಷಿಗಳು ನಾಳೆಯಿಂದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಬಹುದು<br />ಪ್ರತಿ ವಾರ್ಡ್ನಲ್ಲೂ ಪಕ್ಷದ ಕಚೇರಿ ತೆರೆಯಲು ವಾರ್ಡ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದೇವೆ. ವಾರ್ಡ್ ಮಟ್ಟದಲ್ಲಿ ಪಕ್ಷ ಸದೃಢ ಮಾಡಲು ಇವತ್ತಿನಿಂದಲೇ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ರೆಡ್ಡಿ ಹೇಳಿದರು.</p>.<p><strong>ಸಿಎಎ ಖಂಡಿಸಿ ಪ್ರತಿಭಟನೆಗೆ ನಿರ್ಧಾರ: </strong>ಪೌರತ್ವ ತಿದ್ದುಪಡಿ ಕಾಯ್ದೆ ಖಂಡಿಸಿ ಇದೇ 24 ರಂದು ಟೌನ್ಹಾಲ್ ಬಳಿ ಬೆಂಗಳೂರು ಜೆಡಿಎಸ್ ವಿಭಾಗದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲು ಸಭೆಯಲ್ಲಿ ತಿರ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>