ಸುಳ್ಯ ತಾಲ್ಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ಅವರು ಸುಳ್ಯದಲ್ಲಿ ವಕೀಲ ವೃತ್ತಿಯಲ್ಲಿದ್ದರು. ಆ ಸಂದರ್ಭದಲ್ಲಿ ಅವರನ್ನು ಬಿಜೆಪಿ ನಾಯಕರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದರು. ಮೊದಲ ಬಾರಿ ಸ್ಪರ್ಧಿಸಿ ಸೋತಿದ್ದ ಅವರಿಗೆ ಎರಡನೇ ಬಾರಿ ಅವಕಾಶ ನೀಡಿ, ಗೆಲ್ಲಿಸಿಕೊಡುವ ಮೂಲಕ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರು.