ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ತಂತಿ ತಗುಲಿ ಹೊತ್ತಿ ಉರಿದ ತೆಂಗಿನ ಮರ

Last Updated 22 ಜೂನ್ 2019, 19:40 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕು ಚನ್ನೊಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತೆಂಗಿನ ಮರವೊಂದು ಶನಿವಾರ ಹೊತ್ತಿ ಉರಿಯಿತು. ಸಂಜೆ ಮರದಿಂದ ತೆಂಗಿನ ಗರಿಯೊಂದು ವಿದ್ಯುತ್ ತಂತಿಯ ಮೇಲೆ ಬಿದ್ದ ತಕ್ಷಣ ಮರಕ್ಕೆ ಬೆಂಕಿ ಹೊತ್ತಿಕೊಂಡಿತು.

ಸಮೀಪದಲ್ಲೇ ಹಸುಗಳನ್ನು ಕಟ್ಟಲಾಗಿತ್ತು, ಅಕ್ಕಪಕ್ಕದಲ್ಲೇ ಮನೆಗಳಿದ್ದವು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಗ್ರಾಮಸ್ಥ ಕಿರಣ್ ತಿಳಿಸಿದರು.

ವಿದ್ಯುತ್ ತಂತಿ ಜೋತು ಬಿದ್ದಿರುವುದೇ ಈ ರೀತಿಯ ಘಟನೆಗೆ ಕಾರಣವಾಗಿದ್ದು, ಬೆಸ್ಕಾಂ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

‘ಪರಿಶೀಲನೆ ನಡೆಸಿ ಮುಂದೆ ಈ ರೀತಿಯ ಅನಾಹುತ ಆಗದಂತೆ ಎಚ್ಚರಿಕೆ ವಹಿಸಲಾಗುವುದು’ ಎಂದುಬೆಸ್ಕಾಂ ದಾಬಸ್‌ಪೇಟೆ ಉಪವಲಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅರಸರಾಜು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT