‘ಕಲ್ಲಮುಂಡ್ಕೂರಿನ ಐದು ಸೆಂಟ್ಸ್ ಜಾಗದಲ್ಲಿ ಬಾಬು ಎಂಬುವರು ಮೃತಪಟ್ಟಿದ್ದರು. ಇವರ ಶವ ಸಂಸ್ಕಾರಕ್ಕೆ ಮನೆ ಆವರಣದಲ್ಲಿ ಜಾಗ ಇರಲಿಲ್ಲ. ಸಾರ್ವಜನಿಕ ರುದ್ರಭೂಮಿಯೂ ಇಲ್ಲ. ಬೇರೆ ದಾರಿ ಕಾಣದೆ ಮೃತರ ಕುಟುಂಬದವರು ರಸ್ತೆ ಬದಿಯಲ್ಲೇ ಶವ ಸಂಸ್ಕಾರ ನಡೆಸಿದ್ದಾರೆ. ಶಾಲಾ ಮಕ್ಕಳು, ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಇಂಥ ಪ್ರಕರಣ ನಡೆದಿರುವುದು ಪ್ರಜ್ಞಾವಂತರನ್ನು ಕಳವಳಕ್ಕೀಡು ಮಾಡಿದೆ’ ಎಂದು ಸ್ಥಲೀಯರು ತಿಳಿಸಿದ್ದಾರೆ.