ಚಲಪತಿ ಕುರುಬ ಸಮುದಾಯದವರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಲಿ ಶಾಸಕ ವರ್ತೂರು ಪ್ರಕಾಶ್ ಸಹ ಅದೇ ಸಮುದಾಯದವರು. ಹೀಗಾಗಿ ಕುರುಬ ಸಮುದಾಯದ ಮತಗಳು ವಿಭಜನೆಯಾಗುವುದನ್ನು ತಪ್ಪಿಸಲು ವರ್ತೂರು ಪ್ರಕಾಶ್ ಬೆಂಬಲಿಗರು ಓಂಶಕ್ತಿ ಚಲಪತಿ ಅವರ ಕಾರುಗಳಿಗೆ ಬೆಂಕಿ ಹಚ್ಚಿ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಬೆದರಿಸಲು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.