ಸೆ. 24ರಂದು ಮುಂಜಾನೆ ನಗರದ ಹೊರವರ್ತುಲ ರಸ್ತೆಯಲ್ಲಿ ಈ ಅಪಘಾತ ನಡೆದಿತ್ತು. ಕಾರಿನಲ್ಲಿ ನಾಲ್ವರು ಮಾತ್ರ ಪಯಣಿಸುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ, ಪೊಲೀಸರು ಸಲ್ಲಿಸಿರುವ ಜಾರ್ಜ್ ಶೀಟ್ನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ನಟರಾದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್, ಚಾಲಕ ಆಂಟನಿ ರಾಯ್ ಹಾಗೂ ದರ್ಶನ್ ಸ್ನೇಹಿತ ಪ್ರಕಾಶ್ ಇದ್ದರು ಎಂದು ನಮೂದಿಸಲಾಗಿದೆ.