ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಪರಮೇಶ್ವರ ನಾಯ್ಕ ಅವರ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಿಸಿರುತ್ತಾರೆ. ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದ್ದರು.