ನಾಗರಾಜ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಮತ್ತು ವಿಜಯಶಂಕರ್ ಪರ ವೈ.ಆರ್.ಸದಾಶಿವ ರೆಡ್ಡಿ ವಾದ ಮಂಡಿಸಿ, ‘ಅರ್ಜಿದಾರರು ಕಾನೂನು ಪ್ರಕಾರವೇ ತಮ್ಮ ಕೆಲಸ ಮಾಡಿದ್ದಾರೆ. ಅವರು ಮುಗ್ಧರು ಮತ್ತು ಸರ್ಕಾರಿ ನೌಕರರು. ಮಧ್ಯಂತರ ಜಾಮೀನು ನೀಡದೇ ಹೋದರೆ ಅವರ ಸಂವಿಧಾನದತ್ತ ಮೂಲಭೂತ ಹಕ್ಕು ಉಲ್ಲಂಘನೆ ಆಗುತ್ತದೆ’ ಎಂದು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದರು.