ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ–ಸುಮಲತಾ ಚರ್ಚೆ ಗೊತ್ತಿಲ್ಲ: ತಮ್ಮಣ್ಣ

Last Updated 15 ಮಾರ್ಚ್ 2019, 4:14 IST
ಅಕ್ಷರ ಗಾತ್ರ

ಮಂಡ್ಯ: ‘ನಟಿ ಸುಮಲತಾ ಅವರನ್ನು ಜೆಡಿಎಸ್‌ ಅಭ್ಯರ್ಥಿ ಮಾಡುವ ಆಸೆ ಇತ್ತು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಸಲು ಪ್ರಯತ್ನಿಸಿದೆ. ಆದರೆ ಅವರು ಒಪ್ಪಲಿಲ್ಲ. ಇಬ್ಬರ ನಡುವೆ ಏನು ನಡೆದಿದೆ ಎಂಬುದು ಗೊತ್ತಿಲ್ಲ’ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಗುರುವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿ, ‘ಸುಮಲತಾ ಅವರನ್ನು ಜೆಡಿಎಸ್‌ಗೆ ಕರೆತಂದು ಟಿಕೆಟ್‌ ನೀಡಲು ಉದ್ದೇಶಿಸಿದ್ದೆ. ಅದಕ್ಕಾಗಿ ಅಂಬರೀಷ್‌ ಸಂಬಂಧಿ ಮಧು ಮೂಲಕ ಇಬ್ಬರ ನಡುವೆ ಸಂಧಾನಕ್ಕೆ ವೇದಿಕೆ ಸಿದ್ಧಗೊಳಿಸಿದ್ದೆ’ ಎಂದು ತಿಳಿಸಿದರು.

‘ಸುಮಲತಾ ಅವರು ಜೆಡಿಎಸ್‌ ವರಿಷ್ಠರನ್ನು ಭೇಟಿ ಮಾಡಿ, ನಾನೇ ಅಭ್ಯರ್ಥಿಯಾಗುತ್ತೇನೆ. ಟಿಕೆಟ್‌ ಕೊಡಿ ಎಂದು ಕೇಳಬೇಕಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT