‘ಲಾಕ್ಡೌನ್ ಸಡಿಲಿಕೆ ನಂತರ ಅಂತರರಾಜ್ಯ, ಅಂತರಜಿಲ್ಲೆಗಳ ನಡುವೆ ಸಂಚಾರ ಮುಕ್ತವಾಗಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಿದೆ. ಲಾಕ್ಡೌನ್ನಿಂದ ಸಂತ್ರಸ್ತರಾದವರು ಬದುಕು ಕಟ್ಟಿಕೊಳ್ಳಲು ಸಮಸ್ಯೆ ಆಗದಂತೆ ನೆರವು ಒದಗಿಸಲಾಗಿದೆ. ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಸಮೀಕ್ಷೆ ನಡೆಸಿ ಮಾಹಿತಿಯನ್ನು ಡಿಜಿಟಲೀಕರಣ ಮಾಡಲಾಗಿದೆ. ಉಚಿತವಾಗಿ ಕೋವಿಡ್ ಚಿಕಿತ್ಸೆ ಹಾಗೂ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.