ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿಗೆ ಬಿದ್ದ ವಾಹನ: ಚಾಲಕ ಸಾವು

Last Updated 1 ಅಕ್ಟೋಬರ್ 2019, 19:58 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಕೆಲ್ಲೋಡು ಬಳಿಯ ವೇದಾವತಿ ನದಿಗೆ ಮಂಗಳವಾರ ನಸುಕಿನಲ್ಲಿ 407 ವಾಹನ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಡಿ. ಹನುಮಂತಪ್ಪ(43) ಮೃತವ್ಯಕ್ತಿ. ಹ್ಯಾಂಡ್‌ಪೋಸ್ಟ್‌ ಕಡೆಯಿಂದ ವೇಗವಾಗಿ ಬಂದ ವಾಹನ ಚಾಲಕರ ಅಜಾಗರೂಕತೆಯಿಂದ ಇಲ್ಲಿನ ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಐತಿಹಾಸಿಕ ಕೃಷ್ಣ ರಾಜೇಂದ್ರ ಸೇತುವೆ ಪಕ್ಕದಲ್ಲಿ ಪಲ್ಟಿಯಾಗಿದೆ.

ನದಿಯಲ್ಲಿ ಪಲ್ಟಿಯಾಗಿದ್ದ ವಾಹನ ನೋಡಲು ಸಾವಿರಾರು ಜನರು ಸೇರಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಹೊಸದುರ್ಗದ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಮುಳುಗಿದ್ದ ವಾಹನದೊಳಗಿದ್ದ ಮೃತದೇಹವನ್ನು ಹೊರಗೆ ತಂದರು. ನಂತರ ಕ್ರೇನ್‌ ಸಹಾಯದಿಂದ ವಾಹನವನ್ನು ಮೇಲಕ್ಕೆ ಎತ್ತಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT