ನದಿಗೆ ಬಿದ್ದ ವಾಹನ: ಚಾಲಕ ಸಾವು

ಹೊಸದುರ್ಗ: ತಾಲ್ಲೂಕಿನ ಕೆಲ್ಲೋಡು ಬಳಿಯ ವೇದಾವತಿ ನದಿಗೆ ಮಂಗಳವಾರ ನಸುಕಿನಲ್ಲಿ 407 ವಾಹನ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಡಿ. ಹನುಮಂತಪ್ಪ(43) ಮೃತವ್ಯಕ್ತಿ. ಹ್ಯಾಂಡ್ಪೋಸ್ಟ್ ಕಡೆಯಿಂದ ವೇಗವಾಗಿ ಬಂದ ವಾಹನ ಚಾಲಕರ ಅಜಾಗರೂಕತೆಯಿಂದ ಇಲ್ಲಿನ ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಐತಿಹಾಸಿಕ ಕೃಷ್ಣ ರಾಜೇಂದ್ರ ಸೇತುವೆ ಪಕ್ಕದಲ್ಲಿ ಪಲ್ಟಿಯಾಗಿದೆ.
ನದಿಯಲ್ಲಿ ಪಲ್ಟಿಯಾಗಿದ್ದ ವಾಹನ ನೋಡಲು ಸಾವಿರಾರು ಜನರು ಸೇರಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಹೊಸದುರ್ಗದ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಮುಳುಗಿದ್ದ ವಾಹನದೊಳಗಿದ್ದ ಮೃತದೇಹವನ್ನು ಹೊರಗೆ ತಂದರು. ನಂತರ ಕ್ರೇನ್ ಸಹಾಯದಿಂದ ವಾಹನವನ್ನು ಮೇಲಕ್ಕೆ ಎತ್ತಲಾಯಿತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.